ಪಾವಗಡ ಬಸ್ ದುರಂತ ಗಾಯಾಳುಗಳ ಆರೋಗ್ಯ ವಿಚಾರಿಸಿದ ಆರೋಗ್ಯ ಸಚಿವ ಡಿ ಸುಧಾಕರ್ 

ಪಾವಗಡ ಬಸ್ ದುರಂತ ಗಾಯಾಳುಗಳ ಆರೋಗ್ಯ ವಿಚಾರಿಸಿದ ಆರೋಗ್ಯ ಸಚಿವ ಡಿ ಸುಧಾಕರ್ 

 

ತುಮಕೂರು_ಶನಿವಾರ ನಡೆದ ಪಾವಗಡ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸೋಮವಾರ ಬೆಳಗ್ಗೆ ತುಮಕೂರು ಜಿಲ್ಲಾಸ್ಪತ್ರೆಗೆ ಬೇಟಿ ನೀಡಿದ ಆರೋಗ್ಯ ಸಚಿವರು ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

 

 

 

 

ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಹಿರಿಯ ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಗಾಯಾಳುಗಳಿಗೆ ಧೈರ್ಯ ತುಂಬಿದ್ದಾರೆ.

 

 

 

ಭೇಟಿ ವೇಳೆ ಕೆಲ ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು ಪರೀಕ್ಷೆಯ ಬಗ್ಗೆ ಹೆದರುವ ಅವಶ್ಯಕತೆ ಇಲ್ಲ ನಿಮಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು ಇದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.

 

 

 

ಇದೇ ಸಂದರ್ಭದಲ್ಲಿ ಬಸ್ ದುರಂತದಲ್ಲಿ ಗಾಯಗೊಂಡಿರುವ ರೋಗಿಗಳಿಂದ ಬಸ್ ದುರಂತ ಹೇಗೆ ನಡೆಯಿತು ಎಂದು ಮಾಹಿತಿ ಪಡೆದ ಸಚಿವರು.

 

 

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ನಾಗೇಂದ್ರಪ್ಪ ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ , ಡಾಕ್ಟರ್ ಚಂದನ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

 

ವರದಿ_ ಮಾರುತಿ ಪ್ರಸಾದ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version