ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಜಿ ಬಿ ಜ್ಯೋತಿ ಗಣೇಶ್

ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಜಿ ಬಿ ಜ್ಯೋತಿ ಗಣೇಶ್

 

 

 

 

 

ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಇಂದು ಬೃಹತ್‌ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ರವರು ಖಾಸಗಿ ಹೋಟೆಲ್‌ವೊಂದರಲ್ಲಿ ಸುದ್ಧಿಗೋಷ್ಠಿಯನ್ನು ನಡೆಯಿಸಿ ಉತ್ತಮವಾದ ವ್ಯಕ್ತಿಗೆ ಮತ ನೀಡುವುದರೊಂದಿಗೆ ತಮ್ಮ ಹಕ್ಕು ಚಲಾಯಿಸಿ ಎಂದು ಮತಜಾಗೃತಿ ಮಾಡಿದರು.

 

 

 

 

ತುಮಕೂರು ನಗರದಲ್ಲಿ ನಮ್ಮ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್‌ ಪಕ್ಷವೇ ಎದುರಾಳಿಯಾಗಿದ್ದು, ಜೆಡಿಎಸ್‌ ಪಕ್ಷ ಈ ಭಾರಿ ಮಾತ್ರ ತೀವ್ರ ಪೈಪೋಟಿ ಮಾಡುತ್ತಿದ್ದೆ, ಮುಂದಿನ ದಿನಗಳಲ್ಲಿ ಈ ಕುರಿತು ಅವಲೋಕನ ಮಾಡಲಾಗುವುದೆಂದು ಹೇಳಿದರು.

 

 

 

 

 

 

ಈ ಭಾರಿ ನಾನು ಕನಿಷ್ಠ 10000 ಮತಗಳ ಅಂತರದಿಂದ ಜಯಗಳಿಸುವುದಾಗಿ ತಿಳಿಸಿದರು. ಇನ್ನು ನಾಮಪತ್ರ ಸಲ್ಲಿಸುವುದಕ್ಕೂ ಮುಂಚಿತವಾಗಿ ಕಾಲ್‌ಟೆಕ್ಸ್‌ ವೃತ್ತದಲ್ಲಿರುವ ಗಣೇಶನ ದೇವಸ್ಥಾನಕ್ಕೆ ತೆರಳಿ ತಮ್ಮ ಬಿ ಫಾರಂ ಮತ್ತು ನಾಮಪತ್ರಗಳಿಗೆ ವಿಶೇಷ ಪೂಜೆಯನ್ನು ನೆರವೇರಿಸಿ ತದನಂತರ ಬೃಹತ್‌ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರವನ್ನು ಸಲ್ಲಿಸಿದರು.

 

 

 

 

ನಗರ ಹಾಗೂ ಗ್ರಾಮಾಂತರ ಅಭ್ಯರ್ಥಿಗಳಿಂದ ಬೃಹತ್ ರ್ಯಾಲಿ.

 

 

 

ಇನ್ನು ತುಮಕೂರು ನಗರ ಪಕ್ಷದ ಅಭ್ಯರ್ಥಿ ಜಿ ಬಿ ಜ್ಯೋತಿ ಗಣೇಶ್ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಬಿ ಸುರೇಶ್ ಗೌಡ ಅವರು ಒಟ್ಟಿಗೆ ಜೋಡೆತ್ತು ಗಳಂತೆ ತೆರೆದ ವಾಹನದಲ್ಲಿ ಒಟ್ಟಿಗೆ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

 

ಜೆಡಿಎಸ್ ಪಕ್ಷದ ಕಾರ್ಯಕರ್ತರ ಸೇರ್ಪಡೆ ಗೆ ಸಿದ್ಧತೆ.

 

 

ಇನ್ನು ತಮ್ಮ ಆಡಳಿತ ಅವಧಿಯಲ್ಲಿ ತುಮಕೂರು ನಗರದಲ್ಲಿ ನಿರ್ವಹಿಸಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜೆಡಿಎಸ್ ಪಕ್ಷದಿಂದ ಶೀಘ್ರವೇ ದೊಡ್ಡ ಪಡೆಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ

ವರದಿ ವಿಜಯ ಭಾರತ ನ್ಯೂಸ್ ಡೆಸ್ಕ್

Leave a Reply

Your email address will not be published. Required fields are marked *

You cannot copy content of this page

error: Content is protected !!