ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ನಿಗದಿ ಮಾಡಲು ಚಿದಾನಂದಗೌಡ ಒತ್ತಾಯ.

ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ನಿಗದಿ ಮಾಡಲು ಚಿದಾನಂದಗೌಡ ಒತ್ತಾಯ.

 

 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಪ್ರತಿನಿಧಿಗಳಾಗಿದ್ದಾರೆ. ಅನೇಕ ಇಲಾಖೆಗಳಿಂದ ಲಕ್ಷಾಂತರ ನೌಕರರು ಕೆಲಸ ಮಾಡುತ್ತಿದ್ದು. ಸದಾ ಒಂದಿಲ್ಲೊಂದು ಸಮಸ್ಯೆಗಳಿಗೆ ಈಡಾಗು ತ್ತಿರುವುದು ವಿಷಾದನೀಯ. ಕೋವಿಡ್ ಬಂದಾಗಿನಿಂದಲೂ ರಾಜ್ಯ ಸರ್ಕಾರಿ ನೌಕರರು ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದೆ ಮಾನಸಿಕ ಒತ್ತಡದಲ್ಲಿ ಸಿಲುಕಿದ್ದರು. ಸರ್ಕಾರಿ ನೌಕರರ ಸಂಘದಿಂದ ಆಯೋಜನೆ ಗೊಂಡಿರುವ ಕ್ರೀಡಾಕೂಟದಿಂದ ಎಲ್ಲಾ ನೌಕರಿಗೆ ಒತ್ತಡದಿಂದ ಹೊರಬರಲು ಇದೊಂದು ಉತ್ತಮ ವೇದಿಕೆಯಾಗಿದ್ದು ಅದನ್ನು ಸರ್ಕಾರಿ ನೌಕರರು ಬಳಸಿಕೊಳ್ಳಬೇಕಾಗಿದೆ ಎಂದು ಚಿದಾನಂದಗೌಡ ತಿಳಿಸಿದರು.

 

ಶ್ರೀ ಸಿದ್ಧಾರ್ಥ ತಾಂತ್ರಿಕ ಶಿಕ್ಷಣ ವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಾತನಾಡಿದ ಚಿದಾನಂದಗೌಡರು.ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಕೋರಿದರು. ಇನ್ನು ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಚಿದಾನಂದಗೌಡರು ಕ್ರಿಕೆಟ್ ಆಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!