ಸಿಡಿಲು ಬಡಿದು ಸಾವನ್ನಪ್ಪಿದ್ದ ವ್ಯಕ್ತಿಯ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿ ಶಾಸಕ ಚಿದಾನಂದ ಗೌಡ

ಸಿಡಿಲು ಬಡಿದು ಸಾವನ್ನಪ್ಪಿದ್ದ ವ್ಯಕ್ತಿಯ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿ ಶಾಸಕ ಚಿದಾನಂದ ಗೌಡ.

ಶಿರಾ ತಾಲ್ಲೂಕಿನ ಕುರುಬರರಾಮನಹಳ್ಳಿ ನಿವಾಸಿಯಾದ ತಿಪ್ಪೇಸ್ವಾಮಿ ಯವರು ಬೆಂಗಳೂರಿನಲ್ಲಿ ವಾಸವಿದ್ದು ಬೆಂಗಳೂರಿನಿಂದ ಶಿರಾ ಗೆ ಬರುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಅನಿವಾರ್ಯವಾಗಿ ಸಾವನ್ನಪ್ಪಿದ್ದ ಕಾರಣದಿಂದ ಇಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಕುರುಬರಾಮನಹಳ್ಳಿ ತಿಪ್ಪೇಸ್ವಾಮಿ ಯವರ ಮನೆಗೆ ಭೇಟಿ ನೀಡಿ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿಗಳ ಧನ ಸಹಾಯ ಮಾಡಿ ಮಕ್ಕಳಿಗೆ ಕೆಲಸ ಕೊಡಿಸುವುದಾಗಿ ತಿಳಿಸಿ ಪತ್ನಿಗೆ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.

 

ಈ ಸಂದರ್ಭದಲ್ಲಿ ದೊಡ್ಡಬಾಣಗೆರೆ ಶ್ರೀಧರ್, ಹೊಸಹಳ್ಳಿ ಸಿದ್ದಲಿಂಗಪ್ಪ, ಎಂ. ದಾಸರಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರಾದ ಈರಣ್ಣ, ಹೊಸಳ್ಳಿ ಚಿದಾನಂದ್, ತಿಪ್ಪೇಸ್ವಾಮಿ, ದೊಡ್ಡಬಾಣಗೆರೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾದ ರಾಜಣ್ಣ, ಹೊಸಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರಾದ ಮಲ್ಲಿಕಾರ್ಜುನ, ರಮೇಶ್ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version