ದಲಿತರ ಸಿಎಂ ಆದರೆ ಖುಷಿಪಡುತ್ತೇನೆ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ರಿಯಾಕ್ಟ್

ದಲಿತರ ಸಿಎಂ ಆದರೆ ಖುಷಿಪಡುತ್ತೇನೆ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಪರಮೇಶ್ವರ್ ರಿಯಾಕ್ಟ್.

 

ಗದಗ- ದಲಿತರು ಸಿಎಂ ಆದರೆ ತಮಗೂ ಖುಷಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು ಇದಕ್ಕೆ ಸಂಬಂಧಿಸಿದಂತೆ ಗದಗದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾಕ್ಟರ್ ಜಿ ಪರಮೇಶ್ವರ್ ಅವರು ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮ ಹಾಕಬೇಕಾಗಿದೆ ಅದರ ಮೂಲಕ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ಸ ಸರ್ಕಾರವನ್ನು ತರಬೇಕು ನಂತರ ಶಾಸಕಾಂಗ ಸಭೆಯಲ್ಲಿ ಯಾರೂ ಮುಖ್ಯಮಂತ್ರಿಗಳಾಗಬೇಕು ಎನ್ನುವುದನ್ನು ಚರ್ಚೆ ಮಾಡಿ ನಂತರ ಹೈಕಮಾಂಡ್ ಮೂಲಕ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಹಾಗಾಗಿ ತಾವು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಈ ನಿಟ್ಟಿನಲ್ಲಿ ತಾವು ಕೆಲಸ ನಿರ್ವಹಿಸುತ್ತವೆ ಎಂದು ಡಾಕ್ಟರ್ ಜಿ ಪರಮೇಶ್ವರ್ ಅವರು ಗದಗದಲ್ಲಿ ತಿಳಿಸಿದ್ದಾರೆ.

 

 

 

ಇನ್ನು ಸ್ಥಳೀಯ ಎಂಎಲ್ಸಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಈ ಬಾರಿ 25 ಕ್ಷೇತ್ರಕ್ಕೂ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಹಾಕಲಾಗುತ್ತದೆ ಕಳೆದ ಚುನಾವಣೆಯನ್ನು ಸಹ ಕಾಂಗ್ರೆಸ್ ಪಕ್ಷದಿಂದ ಗರಿಷ್ಠ ಅಭ್ಯರ್ಥಿಗಳು ಗೆದ್ದಿದ್ದರು. ಈಗ ನಡೆಯಲಿರುವ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಮ್ಮ ಪ್ರಯತ್ನ ಮುಂದುವರಿಸಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version