ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿದ್ದರಾಜು ಸನ್ಮಾನಿಸಿದ ಮುಖಂಡರು.

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿದ್ದರಾಜು ಸನ್ಮಾನಿಸಿದ ಮುಖಂಡರು.

 

 

ಇತ್ತೀಚಿಗೆ ರಾಷ್ಟ್ರಪತಿ ಪ್ರಶಸ್ತಿ ಗೆ ಭಾಜನರಾದ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದರಾಜು ರವರಿಗೆ ರಾಷ್ಟ್ರಪತಿ ಪ್ರಶಸ್ತಿ ಸಂದ ಸಲುವಾಗಿ ತುಮಕೂರಿನ ಕುಣಿಗಲ್ ರಸ್ತೆಯ ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಸಿದ್ದರಾಜು ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾದ ಇನ್ಸ್ಪೆಕ್ಟರ್ ಸಿದ್ದರಾಜು ರವರನ್ನು ಬಳಗದ ವತಿಯಿಂದ ಸನ್ಮಾನಿಸಲಾಯಿತು.

 

ಇದೆ ಸಂದರ್ಭದಲ್ಲಿ ಮಾತನಾಡಿದ ಬಯಲುಸೀಮೆ ನಿಗಮ ಮಂಡಳಿ ಅಧ್ಯಕ್ಷರಾದ ಕಲ್ಲಹಳ್ಳಿ ದೇವರಾಜ ರವರು ಮಾತನಾಡಿ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ ರಾಷ್ಟ್ರಪತಿ ಪ್ರಶಸ್ತಿಗೆ ಭಾಜನರಾಗಿರುವ ಸಿದ್ದರಾಜು ರವರ ಸೇವೆ ನಿಜಕ್ಕೂ ಶ್ಲಾಘನೀಯ ಅವರ ಉತ್ತಮ ಸೇವೆಗೆ ಸಂದ ಗೌರವ ಇದಾಗಿದೆ ಎಂದು ತಿಳಿಸಿದರು.

 

ಅಭಿನಂದನೇ ಸ್ವೀಕರಿಸಿ ಮಾತನಾಡಿದ ಸಿದ್ದರಾಜು ರವರು ಪೊಲೀಸ್ ಇಲಾಖೆ ಹಾಗೂ ಸರ್ಕಾರ ತಮ್ಮ ಸೇವೆಯನ್ನ ಗುರುತಿಸಿ ರಾಷ್ಟ್ರಪತಿ ಪ್ರಶಸ್ತಿ ನೀಡಿರುವುದು ತಮಗೆ ಸಂತಸ ತಂದಿದ್ದು ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

 

ಇನ್ನು ಕಾರ್ಯಕ್ರಮದಲ್ಲಿ ಗೂಳೂರು ವಿಜಯಕುಮಾರ್, ಮಹಾಲಿಂಗಯ್ಯ, ಗಿರೀಶ್, ಅನಂತಗಿರಿ, ಸತೀಶ್ ದಿಬ್ಬುರು, ಸತೀಶ್, ವಿಕಾಸ್ ನಾಗವಲ್ಲಿ ದೇವರಾಜು ಸೇರಿದಂತೆ ಸಿದ್ದರಾಜು ಅಭಿಮಾನಿ ಬಳಗದ ಸದಸ್ಯರು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version