ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಗುರುವಾರ ತುಮಕೂರಿನಲ್ಲಿ ಪ್ರತಿಭಟನೆ.

ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಗುರುವಾರ ತುಮಕೂರಿನಲ್ಲಿ ಪ್ರತಿಭಟನೆ.

 

ತುಮಕೂರು_ಪ್ರವಾದಿ ವಿರುದ್ಧ ಬಿಜೆಪಿ ನಾಯಕಿ ನುಪೂರ್ ಶರ್ಮ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದ ಹಿಂದೂ ಟೈಲರ್ ಕನ್ನಯ್ಯ ಲಾಲ್ ನನ್ನು ರಾಜಸ್ಥಾನದ ಉದಯಪುರದಲ್ಲಿ ನೆನ್ನೆ ಕೆಲವರು ಹತ್ಯೆ ಮಾಡಿದರು.

 

 

 

ಇನ್ನು ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ, ದೇಶಾದ್ಯಂತ ಹಲವು ಹಿಂದೂಪರ ಸಂಘಟನೆಗಳು ಹಾಗೂ ಪ್ರಗತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ದೇಶದಾದ್ಯಂತ ಹಲವು ಕಡೆ ಪ್ರತಿಭಟನೆಗಳ ಮೂಲಕ ಆಕ್ರೋಶ ವ್ಯಕ್ತವಾಗುತ್ತಿದೆ.

 

 

 

ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಗುರುವಾರ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ತುಮಕೂರು ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ತಿಳಿಸಿದ್ದಾರೆ.

 

 

ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಅವರು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ ಕನ್ನಯ್ಯ ಲಾಲ್ ನನ್ನ ಅಂಗಡಿಯಲ್ಲಿ ಹತ್ಯೆ ಮಾಡಿದ್ದು ನಿಜಕ್ಕೂ ಖಂಡನೀಯ . ಅತಿ ಕ್ರೂರವಾಗಿ ಟೈಲರ್ ಕನ್ನಯ್ಯ ಲಾಲ್ ನನ್ನ ಹತ್ಯೆ ಮಾಡಿದ್ದಾರೆ ಈ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ ಹತ್ಯೆ ಮಾಡಿರುವ ಆರೋಪಿಗಳು ವಿಡಿಯೋ ಸಹ ಮಾಡಿ ವಿಕೃತಿ ಮೆರೆದಿದ್ದು ಅದರ ನಂತರವೂ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡುವುದಾಗಿ ಬೆದರಿಕೆಯನ್ನು ಹಾಕಿರುವ ಇಂತಹ ಉಗ್ರರ ವಿರುದ್ಧ ಕೂಡಲೇ ಶಿಸ್ತು ಕ್ರಮ ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಹಾಗಾಗಿ ಗುರುವಾರ ತುಮಕೂರಿನ ಬಿಜಿಎಸ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version