ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ …?

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ …?

 

 

ತುಮಕೂರು – ಒಂಟಿ ಮಹಿಳೆಯೊಬ್ಬಳನ್ನ ಹಿಂಬಾಲಿಸಿಕೊಂಡು ಹೋಗಿ ವ್ಯಕ್ತಿ ಒಬ್ಬ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

 

 

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ.

 

 

ಘಟನೆ ಬೆಳಕಿಗೆ ಬಂದ ಬೆನ್ನೆಲ್ಲೆ ಕೊರಟಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.

 

 

ಘಟನೆಯಲ್ಲಿ 55 ವರ್ಷದ ಮಹಿಳೆ ಮೃತಪಟ್ಟಿದ್ದು ಮೃತ ಪಟ್ಟ ಮಹಿಳೆ ಸಾವಿತ್ರಮ್ಮ ರಾಗಿ ಹಿಟ್ಟು ಹಾಕಿಸಿಕೊಳ್ಳಲು ಅಂಗಡಿಗೆ ಹೋದ ಸಂದರ್ಭದಲ್ಲಿ ಆಕೆಯನ್ನ ಹಿಂಬಾಲಿಸಿ ಅತ್ಯಾಚಾರ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು.

 

 

 

ಘಟನಾ ಸ್ಥಳಕ್ಕೆ ಶ್ವಾನದಳದ ತಂಡ ಬಂದು ಪರಿಶೀಲನೆ ಮಾಡಲಾಗಿ ಆರೋಪಿಯ ಸುಳಿವು ಕಂಡು ಹಿಡಿಯಲು ಯಶಸ್ವಿಯಾಗಿದ್ದು ಅದೇ ಗ್ರಾಮದ ಮಲ್ಲಿಕಾರ್ಜುನ್ ಎಂಬಾತ ಕೃತ್ಯ ಎಸಗಿರುವ ಆರೋಪದಲ್ಲಿ ಬಂಧಿಸಲಾಗಿದ್ದು ಸಾವಿತ್ರಮ್ಮ ಹಾಗೂ ಮಲ್ಲಿಕಾರ್ಜುನ್ ಸಂಬಂಧಿಗಳಾಗಿದ್ದು ಜಮೀನು ವಿಚಾರದಲ್ಲಿ ಸಾವಿತ್ರಮ್ಮ ಹಾಗೂ ಆರೋಪಿ ಮಲ್ಲಿಕಾರ್ಜುನ್ ಗೆ ಆಗಾಗ ಗಲಾಟೆ ನಡೆಯುತ್ತಿತ್ತು ಹಾಗಾಗಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

 

 

 

ಇನ್ನು ಮೃತ ದೇಹವನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಧುಗಿರಿ ಉಪ ಅಧೀಕ್ಷಕ ವೆಂಕಟೇಶ್ ನಾಯ್ಡು ಸೇರಿದಂತೆ ಹಿರಿಯ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ

 

 

 

 

 

 

ಆರೋಪಿ ಮಲ್ಲಿಕಾರ್ಜುನನ ವಶಕ್ಕೆ ಪಡೆದ ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

 

 

 

 

 

 

 

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version