ಮೈಸೂರಿನಲ್ಲಿ ಮರಕಡಿದು ಹೆಲಿಟೂರಿಸಂ ವಿಚಾರ. ಸೇವ್ ಮೈಸೂರು ಕ್ಯಾಂಪೈನ್‌ಗೆ ಸಾಥ್ ನೀಡಿದ ಸಲಗ ಟೀಂ.

 

ಯೋಜನೆ ಪರಾಮರ್ಶೆ ಮಾಡಿ ಅಂತ ಸರ್ಕಾರಕ್ಕೆ ನಟ ದುನಿಯಾ ವಿಜಯ್ ಸಲಹೆ.

ಫೇಸ್‌ಬುಕ್‌ನಲ್ಲಿ ಸೇವ್ ಮೈಸೂರು ಕ್ಯಾಂಪೈನ್‌ಗೆ ಬೆಂಬಲಿಸಿ ಪೋಸ್ಟ್ ಹಾಕಿದ ದುನಿಯಾ ವಿಜಯ್.

ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡೋ ಸಲುವಾಗಿ ಲಲಿತಮಹಾಲ್ ಹೋಟೆಲ್ ಮುಂಭಾಗದ ಮರಗಳನ್ನ ಕಡಿಯೋ ವಿಚಾರ ಗಮನಕ್ಕೆ ಬಂತು…ನಾವುಗಳು ಮರ ಬೆಳೆಸೋಕೆ ಆಗದಿದ್ದರೂ ಮರ ಕತ್ತರಿಸಲು ಮುಂದಾಗಬಾರದು. ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು..ಶೂಟಿಂಗ್ ಟೈಂ ಅಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದಾಗ ಖುಷಿ ಆಗುತ್ತೆ ಆ ಜಾಗ‌ ನೋಡಿದ್ರೆ.. ಈ ಯೋಜನೆಯನ್ನ ಮತ್ತೊಮ್ಮೆ ಪರಾಮರ್ಶೆ ಮಾಡಿ, ಮರ ಕಡಿಯೋದನ್ನ ಬಿಟ್ಟು ಪರ್ಯಾಯವಾಗಿ ಹೆಲಿ ಟೂರಿಸಂ ಮಾಡೋ ಪ್ಲಾನ್ ಮಾಡಿ…ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಹೇಗಿರೋತ್ತೋ ಮರ ಕಡಿದು ಪರಿಸರ ಹಾಳು ಮಾಡಿ ಹೆಲಿ ಟೂರಿಸಂ ಮಾಡೋದಕ್ಕು ಅಷ್ಟೆ ವಿರೋಧ ಇರುತ್ತೆ.. ಸೇವ್ ಮೈಸೂರು ಕ್ಯಾಂಪೈನ್‌ಗೆ ನನ್ನ ಬೆಂಬಲ ಇದೆ…ಸರ್ಕಾರ ಮತ್ತೆ ಯೋಚನೆ ಮಾಡಿ ಯೋಜನೆ ಕೈಗೆತ್ತಿಕೊಳ್ಳಲಿ…

ಸರ್ಕಾರಕ್ಕೆ ಸಲಹೆ ನೀಡಿ ಸೇವ್ ಮೈಸೂರು ಕ್ಯಾಂಪೈನ್‌ಗೆ ಬೆಂಬಲಿಸಿದ ನಟ ದುನಿಯಾ ವಿಜಯ್.

Leave a Reply

Your email address will not be published. Required fields are marked *

You cannot copy content of this page

error: Content is protected !!