ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲು ಮೃತ ದೇಹಕ್ಕಾಗಿ ಹುಡುಕಾಟ.

ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲು ಮೃತ ದೇಹಕ್ಕಾಗಿ ಹುಡುಕಾಟ.

 

 

ತುಮಕೂರು _ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

 

 

ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹೆಬ್ಬೂರು ಹೋಬಳಿಯ ಅರಿಯೂರು ಬಳಿಯ ದೇವರಹಟ್ಟಿ ಗ್ರಾಮದ ಇಬ್ಬರು ಬಾಲಕರು ದನಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದು ಇದೇ ಸಂದರ್ಭದಲ್ಲಿ ಈಜು ಬಾರದೆ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೆಹಗಳಿಗಾಗಿ ಹುಡುಕಾಟ ನಡೆಯುತ್ತಿದೆ.

 

 

ಮೃತ ಪಟ್ಟ ಬಾಲಕರನ್ನ ಮನೋಜ್ (12) ಹಾಗೂ ಚಿರಂತ್ (14)ಎಂದು ಗುರುತಿಸಲಾಗಿದ್ದು ಪಾಲಕರ ಮೃತ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

 

 

ಮೃತಪಟ್ಟ ಬಾಲಕರ ಮೃತದೇಹಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ನಡೆಸಿದರು ಇದುವರೆಗೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತ ದೇಹಗಳ ಪತ್ತೆ ಕಾರ್ಯ ಸೋಮವಾರ ಮುಂದುವರೆಯಲಿದೆ ಎನ್ನಲಾಗಿದೆ.

 

 

 

 

ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!