ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜು ವತಿಯಿಂದ ಒಂದೇ ದಿನ 50 ರೋಗಿಗಳಿಗೆ ರೂಟ್ ಕೆನಾಲ್ ಚಿಕಿತ್ಸೆ

ತುಮಕೂರು : ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಅಂಗ ಸಂಸ್ಥೆಯಾದ ಶ್ರೀ ಸಿದ್ಧಾರ್ಥ ದಂತ ಕಾಲೇಜು ಮತ್ತು ಆಸ್ಪತ್ರೆ ಆಗಲಕೋಟೆ ಇದರ ದಂತ ಸಂರಕ್ಷಣಾ ವಿಭಾಗದ ವತಿಯಿಂದ ಕಾನ್ಸ್ ಅಂಡ್ ಎಂಡೋ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಒಂದೇ ದಿನ ೫೦ ರೋಗಿಗಳಿಗೆ ರೂಟ್ ಕೆನಾಲ್ ಚಿಕಿತ್ಸೆಯನ್ನು ನುರಿತ ದಂತ ವೈದ್ಯರು ಮತ್ತು ವಿದ್ಯಾರ್ಥಿಗಳಿಂದ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ|| ಪ್ರವೀಣ್ ಬಿ.ಕುಡುವರವರು, ಉಪ ಪ್ರಾಂಶುಪಾಲರಾದ ಡಾ|| ನಾಗಲಕ್ಷ್ಮೀ ಚೌಧರಿ, ಡಾ|| ಜೆ.ವಿ.ಭರತೇಶ್, ದಂತ ಸಹ-ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ|| ಸಿ.ಎಂ.ಜಯಶಂಕರ್, ಪ್ರಾಧ್ಯಾಪಕ ವೃಂದ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version