7 ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ. ಮೀಸಲು -ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

7 ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ. ಮೀಸಲು -ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ

 

 

ಬೆಂಗಳೂರು- ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದುಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

 

 

 

ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

 

 

 

ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!