ಹೈಕಮಾಂಡ್ ಸ್ಪಷ್ಟ ನಿಲುವಿದೆ. 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ

ಹೈಕಮಾಂಡ್ ಸ್ಪಷ್ಟ ನಿಲುವಿದೆ. 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ

 

ವಿಶೇಷ ಪ್ರಕರಣವಾಗಿರುವ ಕಾರಣ ಯಡಿಯೂರಪ್ಪರಿಗೆ ಅಧಿಕಾರ ಕೊಡಲಾಗಿತ್ತು.ಎಂದು ಮೈಸೂರಿನಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ..

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಲೇ ಅಡ್ವಾಣಿಯಂತವರಿಗೆ ಅಧಿಕಾರ ಕೊಡಲಿಲ್ಲ.

ಹೈಕಮಾಂಡ್ ಗೆ ಈ ಬಗ್ಗೆ ಸ್ಪಷ್ಟ ನಿಲುವಿದೆ. ಯಡಿಯೂರಪ್ಪ ಭಾವುಕರಾಗುವುದು ಸಹಜ.ಅವರು ಉತ್ತಮ ಆಡಳಿತ ನೀಡಿದ್ದಾರೆ.ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಉತ್ತಮವಾಗಿ ನಡೆಸಿಕೊಂಡಿದ್ದಾರೆ.

ಈ ಬಗ್ಗೆ ಸ್ವತಃ ಯಡಿಯೂರಪ್ಪನವರೆ ಹೇಳಿದ್ದಾರೆ.ಮೂರನೇ ವ್ಯಕ್ತಿಗಳು ಈ ಬಗ್ಗೆ ಮಾತನಾಡಬಾರದು.ಕಾಂಗ್ರೆಸ್ ನವರು ಕೂಡ ಈ ಬಗ್ಗೆ ಮಾತನಾಡಬಾರದು.ಇದು‌ ಬಿಜೆಪಿಯ ಆಂತರಿಕ ವಿಚಾರ ಎಂದು ತಿಳಿಸಿದರು,

ಇನ್ನೂ ಯಡಿಯೂರಪ್ಪ ಭ್ರಷ್ಟ ಮುಖ್ಯಮಂತ್ರಿ ಹಾಗೂ ಮುಂದೆ ಬರುವವರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ವಿ.ಶ್ರೀನಿವಾಸನ್ ಪ್ರಸಾದ್ ತಿರುಗೇಟು ನೀಡಿದ್ದಾರೆ. ಇವರೊಬ್ಬರೆ ಪ್ರಾಮಾಣಿಕರಾ.?ಹಾಗಾದರೆ ಬೇರೆ ಯಾರನ್ನು ಸಿಎಂ ಮಾಡಬಾರದಾ.?

ಜವಬ್ದಾರಿಯುತ ಮಾತನಾಡುವುದನ್ನು ಇನ್ನು ಸಿದ್ದರಾಮಯ್ಯ ಕಲಿತಿಲ್ಲ.ಅವರು ಬಾಲಿಷ ಹೇಳಿಕೆಗಳನ್ನು ಕೊಡತ್ತಿದ್ದಾರೆ.ಸಿಎಂ ಆಗಿದ್ದುಕೊಂಡೆ ಚುನಾವಣೆಯಲ್ಲಿ ಸೋತರು.ಮಂತ್ರಿಗಳೆಲ್ಲ ಉದುರಿಯೋದರು.ಬಾದಾಮಿಯಲ್ಲಿ ಸೋತಿದ್ದರೆ ಸಿದ್ದರಾಮಯ್ಯ ಸ್ಥಿತಿ ಏನಾಗುತಿತ್ತು.ಇವರು ವಿರೋಧ ಪಕ್ಷದ ನಾಯಕ ಹೇಗಾಗಿದ್ದರೆ ಎಂಬುದು ಗೊತ್ತು.

ನಾನೋಬ್ಬ ಹಿರಿಯ ನಾಯಕನಾಗಿದ್ದೆ.ನನ್ನನ್ನ ವ್ಯವಸ್ಥಿತವಾಗಿ ತುಳಿದರು.ಇದಕ್ಕೆ ಪ್ರತಿಯಾಗಿ ತಕ್ಕ ಪಾಠ ಕಲಿಸಿದ್ದೇನೆ.ಇವರ ಹೇಳಿಕೆಗಳೆಲ್ಲ ಬಾಲಿಷ. ಎಂದು  ಹೇಳಿಕೆಗೆ ತಿರುಗೆಟು ನೀಡಿದರು..

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version