ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು . 

 

ಮೈಸೂರು

ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು .

 

 

 

ಮೈಸೂರಿನಲ್ಲಿ ಮಂಡಕಳ್ಳಿ ವಿಮಾನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುತ್ತೇನೆ . ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ ಎಂದರು . ಕೋವಿಡ್ ಕಾರಣದಿಂದಾಗಿ ರಾಜ್ಯದಲ್ಲಿ ಸಂಪನ್ಮೂಲ ಕೊರತೆ ಇದೆ . ಕಳೆದ ಬಾರಿ 2 ಲಕ್ಷ 37 ಸಾವಿರ ಕೋಟಿ ರೂ.ಬಜೆಟ್ ಗಾತ್ರವಿತ್ತು . ಈ ಬಾರಿ ಅಷ್ಟು ಗಾತ್ರದ ಬಜೆಟ್ ಇರಲ್ಲ . ರಾಜ್ಯದಲ್ಲಿ ಶೇ 90 ರಷ್ಟು ಕೋವಿಡ್ ನಿಯಂತ್ರಣದಲ್ಲಿದೆ . ಕೋವಿಡ್ ಬೇಕಾಗಿರುವಷ್ಟು ಹಣಕಾಸು ನೆರವನ್ನು ಸರಕಾರ ಪೂರೈಸುತ್ತದೆ ಎಂದರು . ಶಿವಮೊಗ್ಗ ದಲ್ಲಿ ನಡೆದ ಕಲ್ಲುಕ್ವಾರಿಯಲ್ಲಿನ ಸ್ಫೋಟದ ದುರ್ಘಟನೆ ಯ ಸ್ಥಳಕ್ಕೆ ಇಂದು ಭೇಟಿ ನೀಡುತ್ತೇನೆ . ಘಟನೆಯಿಂದ ಮನೆ ಆಗಿರುವುದನ್ನು ಪರಿಶೀಲಿಸಿ ಅದಕ್ಕೂ ಪರಿಹಾರ ಕೊಡುತ್ತೇವೆ . ಗಣಿಗಾರಿಕೆ ಬೇಕು . ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿ ಅದನ್ನು ಸಕ್ರಮ ಮಾಡಿಕೊಳ್ಳಿ . ಇಲ್ಲ ಅಂದರೆ ಸ್ಥಳ ತನಿಖೆ ಮಾಡಿ ಜಿಲ್ಲಾಧಿಕಾರಿ ಗಳು ಕ್ರಮ ಕೈಗೊಳ್ಳುತ್ತಾರೆ ಎಂದರು . ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ . ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳು ನಡೆಯುತ್ತಿವೆ . ರಸ್ತೆ ಕಾಮಗಾರಿಗಳಿಗೆ ಗಣಿಗಾರಿಕೆ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು . ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು . ಸಕ್ರಮ ಗಣಿಗಾರಿಕೆಗಳಿಗೆ ಮಾತ್ರ ಅವಕಾಶ . ಎಲ್ಲಾ ಜಿಲ್ಲೆಗಳಲ್ಲೂ ಗಣಿಗಾರಿಕೆ ಪರಿಶೀಲನೆಗೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ . ಶಿವಮೊಗ್ಗ ಪ್ರಕರಣದಲ್ಲಿ ಮೃತ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದೇವೆ . ಹಾನಿಗೊಳಗಾದ ಮನೆಗಳಿಗೆ ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You cannot copy content of this page

error: Content is protected !!