ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿ ದುರ್ಮರಣ.

ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿ ದುರ್ಮರಣ.

 

ತುಮಕೂರು: ತುಮಕೂರು ತಾಲ್ಲೂಕು ಮಲ್ಲಸಂದ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಶಿಕ್ಷಕ ದಂಪತಿಗಳು ಮೃತಪಟ್ಟ ಘಟನೆ ನಡೆದಿದೆ.ಇಂದು ದಂಪತಿಗಳು ತುಮಕೂರಿನಿಂದ ಗುಬ್ಬಿ ತಾಲ್ಲೂಕಿನ ತೆವಡೇಹಳ್ಳಿ ಸ್ವಗ್ರಾಮಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಲ್ಲಸಂದ್ರ ಬಳಿಯ ಸೇತುವೆ ಮೇಲೆ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

 

ಮೃತ ಶಿಕ್ಷಕ ಈಶ್ವರಪ್ಪ ಬಿ.ಆರ್.ಪಿ ಯಾಗಿ ಗುಬ್ಬಿ ಬಿ.ಆರ್.ಸಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಲ್ಪನ ಅವರು ಗುಬ್ಬಿ ಪಟ್ಟಣದ ಸರ್ಕಾರಿ ಬಾಲಕರ ಕಿರಿಯ ಪಾಠ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

 

ತುಮಕೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!