ದೇವಸ್ಥಾನದ ಪ್ಲೆಕ್ಸ್ ಹರಿದ ಕಿಡಿಗೇಡಿಗಳು, ದೂರು ದಾಖಲಿಸಿದ ಹಿಂದೂ ಸಂಘಟನೆಯ ಪದಾಧಿಕಾರಿಗಳು

ದೇವಸ್ಥಾನದ ಪ್ಲೆಕ್ಸ್ ಹರಿದ ಕಿಡಿಗೇಡಿಗಳು, ದೂರು ದಾಖಲಿಸಿದ ಹಿಂದೂ ಸಂಘಟನೆಯ ಪದಾಧಿಕಾರಿಗಳು.

 

ತುಮಕೂರು_ದೇವಸ್ಥಾನಕ್ಕೆ ಅಳವಡಿಸಿದ ಫ್ಲೆಕ್ಸ್ ಗಳನ್ನು ಹರಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿಂದೂಪರ ಸಂಘಟನೆಗಳು.

 

 

 

ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಇರುವ ನಾಗರಕಟ್ಟೆ ದೇವಸ್ಥಾನದಲ್ಲಿ ಅಳವಡಿಸಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದುಹಾಕಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಹಿಂದೂಪರ ಸಂಘಟನೆಗಳು ಕೂಡಲೇ ಫ್ಲೆಕ್ಸ್ ಗಳನ್ನು ಹರಿಯುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ತುಮಕೂರು ನಗರ ಠಾಣೆಯ ಲ್ಲಿ ದೂರು ದಾಖಲಿಸಿದ್ದಾರೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಜರಂಗದಳದ ತುಮಕೂರು ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಮಾತನಾಡಿ ಶ್ರೀ ರಾಮನವಮಿಯ ಹಬ್ಬದ ಸಲುವಾಗಿ ದೇವಸ್ಥಾನಕ್ಕೆ ಅಳವಡಿಸಿದ ಫ್ಲೆಕ್ಸ್ ಗಳನ್ನು ಕೆಲ ಕಿಡಿಗೇಡಿಗಳು ಹರಿದಿದ್ದರೆ ಇಂತಹ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

 

ಇನ್ನು ತುಮಕೂರು ಟೌನ್ ಹಾಲ್ ವೃತ್ತದಲ್ಲಿ ಇರುವ ದೇವಸ್ಥಾನದ ಗೋಡೆಗಳಿಗೆ ಅಳವಡಿಸಿದ ಫ್ಲಕ್ಸ್ ಗಳನ್ನು ಹಲವು ಬಾರಿ ಇದೇ ರೀತಿ ಕೆಲ ಕಿಡಿಗೇಡಿಗಳು ಹರಿಯುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಫ್ಲಕ್ಸ್ ಹರಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಿಸಿಟಿವಿಯ ದೃಶ್ಯಗಳ ಸಮೇತ ದೂರು ದಾಖಲಿಸಿದ್ದು ಪೊಲೀಸರು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಪೋಲಿಸರಿಗೆ ಮನವಿ ಮಾಡಿದ್ದಾರೆ.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!