ಪಾವಗಡ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ ಕೈ ಕೈ ಮಿಲಾಯಿಸುವ ಅಂತ ತಲುಪಿದ ಜಗಳ.

ಪಾವಗಡ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ ಕೈ ಕೈ ಮಿಲಾಯಿಸುವ ಅಂತ ತಲುಪಿದ ಜಗಳ.

 

 

ಪಾವಗಡ -ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಪಾವಗಡ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪನವರಿಗೆ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ.

 

 

ಬಿ ಹೊಸಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದ ಸಾರ್ವಜನಿಕರು ಹಾಲಿ ಶಾಸಕರು ರಸ್ತೆ ಅಭಿವೃದ್ದಿ ಕಾರ್ಯಕ್ರಮದ ಗುದ್ದಲಿ ಪೂಜೆ ಮಾಡುಲು ಬಂದಾಗ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

 

 

 

 

 

ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಳೆದ 4.5ವರ್ಷದಿಂದ ಅಭಿವೃದ್ಧಿ ಮಾಡದೆ ಕಾಣೆಯಾಗಿದ್ದು ಈಗ ಚುನಾವಣೆ ಸಂದರ್ಭದಲ್ಲಿ ಕಾಣಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತೀವ್ರ ತರಾಟೆಗೆ ಗ್ರಾಮಸ್ಥರು ಹಾಗೂ ಶಾಸಕರ ಬೆಂಬಲಿಗರ ನಡುವೆ ಮಾತಿನ ಸಮರ ನಡೆದು ಕೈ ಕೈ ಮಿಲಾಯಿಸುವ ಅಂತ ತಲುಪಿತು.

 

 

 

 

 

ಇನ್ನು ಹಾಲಿ ಶಾಸಕ ವೆಂಕಟರಮಣಪ್ಪನವರ ಕ್ಷೇತ್ರದಲ್ಲಿ ಶಾಸಕರ ವಿರುದ್ಧ ಮತದಾರರ ವಿರೋಧಿ ಅಲೆ ಹೆಚ್ಚಾಗಿದೆ ಎನ್ನುವ ಅನುಮಾನ ಸಹ ವ್ಯಕ್ತವಾಗಿದೆ

 

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version