ಹತ್ತು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರ , ಆಟೋ ಪಲ್ಟಿ ಯಾಗಿ ಸಾವು.

ಹತ್ತು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರ , ಆಟೋ ಪಲ್ಟಿ ಯಾಗಿ ಸಾವು.

 

 

ತುಮಕೂರು_ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಯುವಕ ಆಟೋ ಪಲ್ಟಿಯಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಜನಪನಹಳ್ಳಿ ಗ್ರಾಮದ ಬಳಿ ಶುಕ್ರವಾರ ಸಂಜೆ ನಡೆದಿದೆ.

 

ಮೃತಪಟ್ಟ ಯುವಕನನ್ನ ತುಮಕೂರಿನ ಕ್ಯಾತ್ಸಂದ್ರ ಬಳಿಯ ಎಸ್ಎಲ್ಎ ನಗರದ ನಿವಾಸಿ ನರಸಿಂಹಮೂರ್ತಿ ಎಂದು ಗುರುತಿಸಲಾಗಿದ್ದು ಕುಡಿಯುವ ನೀರು ಸರಬರಾಜು ಮಾಡಲು ತೆರಳಿದ್ದ ವೇಳೆ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

 

 

ಇನ್ನು ಅಮೃತಪಟ್ಟ ಯುವಕ ನರಸಿಂಹಮೂರ್ತಿಗೆ ಜನವರಿ 10ರಂದು ಮದುವೆ ನಿಶ್ಚಯವಾಗಿದ್ದು ಹಸೆಮಣೆ ಏರಬೇಕಾಗಿದ್ದ ಯುವಕ ಧಾರಣವಾಗಿ ಸಾವನ್ನಪ್ಪಿದ್ದು ಕುಟುಂಬಸ್ಥರು ಹಾಗೂ ಆಪ್ತ ವಲಯಕ್ಕೆ ತೀವ್ರ ಅಘಾತ ತಂದಿದೆ.

 

 

ಇನ್ನು ಕುಟುಂಬಕ್ಕೆ ಆಧಾರವಾಗಿದ್ದ ನರಸಿಂಹಮೂರ್ತಿ ಜೀವನೋಪಾಯಕ್ಕಾಗಿ ತುಮಕೂರು ನಗರದಲ್ಲಿ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದು ಮದುವೆಗೆ ಹತ್ತು ದಿನ ಬಾಕಿ ಇರುವ ವೇಳೆ ಸಾವನ್ನಪ್ಪಿರುವುದು ನಿಜಕ್ಕೂ ನೋವಿನ ಸಂಗತಿ.

 

 

ಇನ್ನು ಘಟನೆ ನಡೆದ ಕೂಡಲೇ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡು ಮೃತದೇಹ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದರು.

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!