ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಬೇಕು ಎಂದು ವಿವಿಧ ಸಂಘಟನೆಗಳ ಆಗ್ರಹ, ಕ್ಷಣಕ್ಷಣಕ್ಕೂ ಪರಮೇಶ್ವರ್ ಅಭಿಮಾನಿಗಳಿಂದ ಹೆಚ್ಚಿದ ಒತ್ತಡ ಇಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್

ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಬೇಕು ಎಂದು ವಿವಿಧ ಸಂಘಟನೆಗಳ ಆಗ್ರಹ, ಕ್ಷಣಕ್ಷಣಕ್ಕೂ ಪರಮೇಶ್ವರ್ ಅಭಿಮಾನಿಗಳಿಂದ ಹೆಚ್ಚಿದ ಒತ್ತಡ ಇಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್.

 

ತುಮಕೂರು ಗ್ರಾಮಾಂತರ – ತಮ್ಮ ರಾಜಕೀಯ ಜೀವನದಲ್ಲಿ ಯಾವ ಒಂದು ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿ ಅದು ಡಾ. ಜಿ ಪರಮೇಶ್ವರ್ ರವರು, ನಮ್ಮ ಕರ್ನಾಟಕದಲ್ಲಿ ಇದುವರೆಗೂ ಒಂದು ಬಾರಿಯೂ ಕೂಡ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿಲ್ಲ, 8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಉನ್ನತ ಮಟ್ಟದಲ್ಲಿ ಕೊಂಡೊಯ್ದ ಕೀರ್ತಿ ಪರಮೇಶ್ವರ್ ಗೆ ಇದ್ದು .

 

 

 

ಈ ಬಾರಿ ದಲಿತರಿಗೆ ಒಂದು ಅವಕಾಶ ಕೊಡದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇನ್ನಡೆಯಾಗಲಿದೆ ಎಂದು ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೈನ್ಯದ ತುಮಕೂರು ಗ್ರಾಮಾಂತರ ಅಧ್ಯಕ್ಷರು ಹಾಗೂ ಹೆಬ್ಬೂರು ಕಾಂಗ್ರೆಸ್ ಯುವ ಮುಖಂಡರಾದ ಚೇತನ್.ಸಿ ರವರು ತಮ್ಮ ಅಭಿಪ್ರಾಯವನ್ನು  ವ್ಯಕ್ತಪಡಿಸಿ ಡಾಕ್ಟರ್ ಜಿ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ವರಿಷ್ಠರಿಗೆ ಒತ್ತಾಯ ಮಾಡಿದರು.

 

 

 

 

 

 

ಇದೇ ಸಂದರ್ಭದಲ್ಲಿ ಹೆಬ್ಬೂರು ಗೂಳೂರು ಬ್ಲಾಕ್ SC ವಿಭಾಗದ ಅಧ್ಯಕ್ಷರಾದ ಪುರುಷೋತ್ತಮ್ ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಸುದರ್ಶನ್ ರವರು ಹಾಗೂ ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೈನ್ಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version