ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದು ಸ್ಥಳದಲ್ಲೇ ಮೂವರ ಸಾವು.

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದು ಸ್ಥಳದಲ್ಲೇ ಮೂವರ ಸಾವು.

 

 

ಸಿರಾ – ದೇವಸ್ಥಾನಕ್ಕೆಂದು ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಕಾರಿನಲ್ಲಿದ್ದ ಮೂವರು ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

 

 

 

 

ತುಮಕೂರು ಜಿಲ್ಲೆ ಸಿರಾ ತಾಲೂಕಿನ ರಾಮಲಿಂಗಪುರ ಕೆರೆ ಏರಿಯ ಮೇಲೆ ಘಟನೆ ನಡೆದಿದ್ದು .

 

 

 

ಮೃತಪಟ್ಟ ಮಂದಿ ಧರ್ಮಸ್ಥಳದ ಮಂಜುನಾಥ ದೇವಸ್ಥಾನದ ದರ್ಶನಕ್ಕೆಂದು ಹೊರಟಿದ್ದು ಇದೇ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಬರುವ ಮಣ್ಣಮ್ಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲು ಸಾಕ್ಷಿ ಹಳ್ಳಿಗೆ ಬಂದಿದ್ದರು ಎನ್ನಲಾಗಿದೆ.

 

 

 

ಇನ್ನು ದೇವಸ್ಥಾನದಿಂದ ಹೊರಟು ಧರ್ಮಸ್ಥಳಕ್ಕೆ ತೆರಳುವ ವೇಳೆ ಕೆರೆ ಏರಿಯ ಮೇಲೆ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ ಬೆಳಗಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಕೆರೆಗೆ ಬಿದ್ದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಂದಿಯ ಪೈಕಿ ಮೂವರು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

 

 

 

 

ಮೃತಪಟ್ಟವರೆಲ್ಲರೂ ಸಿರಾ ತಾಲೂಕಿನವರಾಗಿದ್ದು ಮೇಕೆರಹಳ್ಳಿಯ ಇಬ್ಬರು ಹಾಗೂ ವೀರಾಪುರ ಗ್ರಾಮದ ಒಬ್ಬ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತಪಟ್ಟವರ ಹೆಸರು ಇನ್ನು ತಿಳಿದು ಬಂದಿಲ್ಲ.

 

 

 

 

ಸಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version