ಸದ್ಯಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಇಲ್ಲ-ಸಿಎಂ ಯಡಿಯೂರಪ್ಪ ಸ್ಪಷ್ಟನೆ.

 

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಇಲ್ಲದೆ ಇರುವುದಿಲ್ಲ. ಲಾಕ್ಡೌನ್ ಆಗುತ್ತೆ ಎನ್ನುವ ಸುದ್ದಿಗೆ ಯಾರು ತಲೆಕೆಡಿಸಿಕೊಳ್ಳಬೇಡಿ ರಾಜ್ಯದ ಜನತೆಗೆ ಯಾವುದೇ ತಪ್ಪು ಮಾಹಿತಿ ನೀಡಬೇಡಿ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸದ್ಯಕ್ಕೆ ವೀಕೆಂಡ್ ಲಾಕ್ಡೌನ್ ಸಹ ಜಾರಿಯಾಗುವುದಿಲ್ಲ ಏಕೆಂದರೆ ಲಾಕ್ಡೌನ್ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಅಂತ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ವಿಧಿಸಲಾಗುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನೆಯಾಗುತ್ತದೆ ಇದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ .ಆದ್ದರಿಂದ ಯಾರೂ ಕೂಡ ತಪ್ಪು ಮಾಹಿತಿಯನ್ನು ಹರಡಬೇಡಿ ಇದೆಲ್ಲಾ ಕೇವಲ ವದಂತಿ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

 

ಆದರೆ ಮುಂದಿನ ವಾರದಲ್ಲಿ ಇದಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ಸಭೆ ನಡೆಯಲಿದ್ದು ನಂತರದ ಬೆಳವಣಿಗೆಯಲ್ಲಿ ಮುಂದಿನ ಸ್ಥಿತಿಗತಿ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!