ಸರ್ವೆಯರ್ ಕಿರುಕುಳಕ್ಕೆ ಬೇಸತ್ತು ವಿಷ ಕುಡಿದ ಗುತ್ತಿಗೆ ನೌಕರ ಆಸ್ಪತ್ರೆಗೆ ದಾಖಲು

ಸರ್ವೆಯರ್ ಕಿರುಕುಳಕ್ಕೆ ಬೇಸತ್ತು ವಿಷ ಕುಡಿದ ಗುತ್ತಿಗೆ ನೌಕರ ಆಸ್ಪತ್ರೆಗೆ ದಾಖಲು

ತುಮಕೂರು _ ಮೇಲಧಿಕಾರಿಗಳ ಕಿರುಕುಳದಿಂದ ಸರ್ವೆ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಗುತ್ತಿಗೆ ನೌಕರನೊಬ್ಬ ಡೆತ್ ನೋಟ್ ಬರೆದು ಕಚೇರಿ ಆವರಣದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ  ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

 

 

 

ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಗಳಿಗೆನ ಹಳ್ಳಿಯ ಗುತ್ತಿಗೆ ನೌಕರ ಮಹೇಶ್ ಎಂಬತ ಇಲಾಖೆಯಲ್ಲಿ ಸರ್ವೆಯರಾಗಿ ಕೆಲಸ ನಿರ್ವಹಿಸುತ್ತಿರುವ ಕವಿತಾ ಎಂಬುವವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನೋಟ್ನಲ್ಲಿ ಬರೆದು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಬೆಳಕಿಗೆ ಬಂದಿದ್ದು ಕೂಡಲೇ ಕುಡಿದ ನೌಕರರನ್ನ ಸ್ಥಳೀಯರು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿಸಲಾಗಿದೆ.

 

ಇನ್ನು ಕಳೆದ 9 ವರ್ಷದಿಂದ ಸರ್ವೆ ಇಲಾಖೆಯಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದು ಸರ್ವೆಯರ  ಕವಿತಾ ಎಂಬುವವರು ಮಾನಸಿಕವಾಗಿ ಕಿರುಕುಳ ನೀಡುತ್ತಿರುವುದಾಗಿ ಆರೋಪ ಮಾಡಿದ್ದು ಸದ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.

 

ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Leave a Reply

Your email address will not be published. Required fields are marked *

You cannot copy content of this page

error: Content is protected !!