ಬೊಮ್ಮಾಯಿ ಸಂಪುಟದಲ್ಲಿ ತುಮಕೂರು ಜಿಲ್ಲೆಗೆ ಬಂಪರ್.

ಬೊಮ್ಮಾಯಿ ಸಂಪುಟದಲ್ಲಿ ತುಮಕೂರು ಜಿಲ್ಲೆಗೆ ಬಂಪರ್.

ರಾಜ್ಯದ ನೂತನ ಮುಖ್ಯಮಂತ್ರಿ ಯಾದ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ತುಮಕೂರು ಜಿಲ್ಲೆಗೆ ಬಂಪರ್ ಕೊಡುಗೆ ಸಿಕ್ಕಿದ್ದು ತುಮಕೂರು ಜಿಲ್ಲೆಯ ಇಬ್ಬರು ಶಾಸಕರು ಸಂಪುಟದಲ್ಲಿ ಸಚಿವರಾಗುವ ಮೂಲಕ ತುಮಕೂರು ಜಿಲ್ಲೆಗೆ ವರದಾನವಾಗಿದೆ.

 

ಇನ್ನು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಚಿಕ್ಕನಾಯಕನಹಳ್ಳಿ ಶಾಸಕರಾದ ಜೆ ಸಿ ಮಾಧುಸ್ವಾಮಿ ರವರು ಕಳೆದ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು ಅದರ ಮುಂದುವರಿದ ಭಾಗವಾಗಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲೂ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಇನ್ನು ತುಮಕೂರು ಜಿಲ್ಲೆಯ ತಿಪಟೂರು ಶಾಸಕರಾದ ಬಿ.ಸಿ ನಾಗೇಶ್ ರವರು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ತುಮಕೂರು ಜಿಲ್ಲೆಯ ಮತ್ತೋರ್ವ ಹಿರಿಯ ಶಾಸಕ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗುವ ಮೂಲಕ ತುಮಕೂರು ಜಿಲ್ಲೆಯ ಇಬ್ಬರು ಶಾಸಕರು ಸಚಿವರಾಗುವ ಮೂಲಕ ತುಮಕೂರು ಜಿಲ್ಲೆಗೆ ಬಂಪರ್ ಲಾಟರಿ ಹೊಡೆದಿದೆ.

 

ಇನ್ನು ಇಬ್ಬರು ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬೆಂಬಲಿಗರ ಪಾಳಯದಲ್ಲಿ ಸಂತಸ ಇಮ್ಮಡಿಗೊಳಿಸಿತು ಇದರ ಮೂಲಕ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಆಗಬೇಕು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version