ಕರೋನ ಸೋಂಕಿತರನ್ನು ಭೇಟಿ ಮಾಡಿದ ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್.

 

 

ತುಮಕೂರು ತಾಲೂಕಿನ ಗೂಳೂರು ಕೊರೊನಾ ಸೋಂಕಿತರ ಹಾಟ್ಸ್ಪಾಟ್ ಆಗಿದ್ದು ದಿನದಿನ ಸೋಂಕಿತರು ಹೆಚ್ಚಾಗಿ ಕಂಡುಬರುತ್ತಿದೆ. ಆದ್ದರಿಂದ ತುಮಕೂರು ಜಿಲ್ಲಾಧಿಕಾರಿಗಳಾದ ಎಸ್ ಪಾಟೀಲ್ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಂಶಿಕೃಷ್ಣರವರು ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿತು.

 

ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸ್ವಚ್ಛತೆ ಬಗ್ಗೆ ಹಾಗೂ ಸೋಂಕಿತರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಸೋಂಕಿತರ ಮನೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಇನ್ನು ಕೆಲ ಸೋಂಕಿತರ ಮನೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಎಲ್ಲರೂ ಆರೋಗ್ಯದ ಬಗ್ಗೆ ಗಮನಹರಿಸಿ ಸಣ್ಣಪುಟ್ಟ ರೋಗ ಲಕ್ಷಣಗಳು ಕಂಡ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆಗೊಳಪಡಿ ಎಂದು ಸಾರ್ವಜನಿಕರಿಗೆ ತಿಳಿಸಿದರು. ಕೊರನ ಎಂದರೆ ಭಯಪಡದೆ ಎಚ್ಚರದಿಂದಿರಬೇಕು ಯಾರು ಕೂಡ ಗಾಬರಿಯಾಗುವ ಅವಶ್ಯಕತೆ ಇಲ್ಲ ಜಿಲ್ಲಾಡಳಿತ ಕೊರೊನಾ ಸೋಂಕು ತಡೆಗಟ್ಟಲು ಸಾಕಷ್ಟು ಕ್ರಮಗಳನ್ನು ಅನುಸರಿಸಿದೆ ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

 

ಇನ್ನು ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಂಶಿಕೃಷ್ಣ ,ಡಿವೈಎಸ್ಪಿ ಜಗದೀಶ್ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version