ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ _ಜಿಲ್ಲಾಧ್ಯಕ್ಷ ಅರ್ ರಾಮಕೃಷ್ಣ.

 

 

 

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣರವರು ತಿಳಿಸಿದ್ದಾರೆ.

 

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಅಧ್ಯಕ್ಷರು ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಮಟ್ಟ ,ತಾಲೂಕ ಮಟ್ಟ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಸದೃಢವಾಗಿದ್ದು ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಇನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಆಗಿನಿಂದ ಇದುವರೆಗೂ ಎಲ್ಲಾ ಮುಖoಡರೂ ಇಂದಿಗೂ ಉತ್ತಮ ಒಡನಾಟ ಹೊಂದುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿರುವ ಆತ್ಮತೃಪ್ತಿ ಇರುವುದಾಗಿ ತಿಳಿಸಿದ್ದಾರೆ.

 

ತಾವು ಅಧ್ಯಕ್ಷರಾಗಿ ಆಯ್ಕೆಆದಾಗಿನಿಂದ ಪಕ್ಷದ ಹಿರಿಯ ಮುಖಂಡರು ಬ್ಲಾಕ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಸ್ಪಂದನೆ ನೀಡಿದ್ದಾರೆ ಹಾಗಾಗಿ ಇದುವರೆಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸುವ ಮೂಲಕ ಅಚ್ಚರಿ ಹೇಳಿಕೆ ನೀಡಿದ್ದಾರೆ.

 

ಕಳೆದ ಕೆಲವು ತಿಂಗಳಿನಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಕೂಗು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ತೆರೆಮರೆಯಲ್ಲಿ ಕಸರತ್ತುಗಳು ಹಾಗೂ ಮುಖಂಡರು ಸಭೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ವಿದಾಯವೋ..? ಅಥವಾ ಇನ್ನೂ ಅಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವೋ..? ಎಂದು ಕಾರ್ಯಕರ್ತರು ಮಾತನಾಡುತ್ತಿದ್ದಾರೆ.

 

ಅದೇನೇ ಇರಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಕೂಗು ಕೇಳಿ ಬಂದಿದ್ದು ಮುಂದಿನ ದಿನದಲ್ಲಿ ಅಧ್ಯಕ್ಷರ ವಿಚಾರದಲ್ಲಿ ಹಲವು ಮುಖಂಡರು ಕಾರ್ಯಕರ್ತರು ಗೊಂದಲಕ್ಕೀಡಾಗಿ ಇರುವುದಂತೂ ನಿಜ.

 

ಇನ್ನು ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಹಿರಿಯ ಮುಖಂಡರು ಕಾರ್ಯಕರ್ತರು ಹಾಗೂ ಬ್ಲಾಕ್ ಮಟ್ಟದ ಪದಾಧಿಕಾರಿಗಳೊಂದಿಗೆ ಪಕ್ಷವನ್ನು ಸಂಘಟನೆ ಮಾಡಿ ಹೆಚ್ಚಿನದಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜಿಲ್ಲಾ ಕಾಂಗ್ರೆಸ್ ಅಧಿಕಾರವನ್ನು ಹಿಡಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

 

ಇನ್ನು ಜಿಲ್ಲಾ ಕಾಂಗ್ರೆಸ್ ಮಟ್ಟದಲ್ಲಿ ಎಲ್ಲಾ ಮುಖಂಡರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ಹಾಗೂ ಇದುವರೆಗೂ ಯಾವುದೇ ಮಾಜಿ ಹಾಗೂ ಹಾಲಿ ಎಂಎಲ್ಎ ಎಂಪಿಗಳು ಹಿರಿಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಸ್ಪಂದಿಸುವ ಮೂಲಕ ಪಕ್ಷವನ್ನು ಉತ್ತಮ ರೀತಿಯಲ್ಲಿ ಸಂಘಟನೆ ಮಾಡಿರು ವುದಾಗಿ ತಿಳಿಸಿದ್ದಾರೆ.

 

ಇದುವರೆಗೂ ಜನ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಆದಾಗ್ಯೂ ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದಲ್ಲಿ ಮುಂದಿನ ದಿನಗಳಲ್ಲಿ ಕೂತು ಬಗೆಹರಿಸಿಕೊಳ್ಳುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ರಾಮಕೃಷ್ಣರವರು ತಿಳಿಸಿದ್ದಾರೆ.

 

ಕರೋನ ಸಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದ ಜನತೆಯ ನೆರವಿಗೆ ಸ್ಪಂದಿಸಬೇಕಾದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಪ್ರದ ಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷವು ದೇಶ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಕಷ್ಟಕ್ಕೀಡಾದ ರೋಗಿಗಳು ಹಾಗೂ ಸಂಕಷ್ಟದಲ್ಲಿರುವ ಜನರ ನೆರವಿಗೆ ಸ್ಪಂದಿಸಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!