ತುಮಕೂರು ಜಿಲ್ಲಾಧಿಕಾರಿ ಆಪ್ತ ಸಹಾಯಕ ಹೇರಂಬ ಎತ್ತಂಗಡಿ, ಹೋರಾಟಗಾರರ ಹೋರಾಟಕ್ಕೆ ಸಿಕ್ಕ ಜಯ.

ತುಮಕೂರು ಜಿಲ್ಲಾಧಿಕಾರಿ ಆಪ್ತ ಸಹಾಯಕ ಹೇರಂಬ ಎತ್ತಂಗಡಿ, ಹೋರಾಟಗಾರರ ಹೋರಾಟಕ್ಕೆ ಸಿಕ್ಕ ಜಯ.

 

 

ತುಮಕೂರು _ತುಮಕೂರು ಜಿಲ್ಲಾಧಿಕಾರಿಗಳ ಆಪ್ತಶಾಖೆಯಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿದ್ದ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಭ ಅವರನ್ನು ಎತ್ತಂಗಡಿ ಮಾಡಲಾಗಿದೆ.

 

 

 

 

ಡಿ ಸಿ ಸೋಮಶೇಖರ್ ಜಿಲ್ಲಾಧಿಕಾರಿಯಾಗಿದ್ದ ಅವಧಿಯಿಂದಲೂ ಸಹ ಹೇರಂಭ ಜಿಲ್ಲಾಧಿಕಾರಿ ಆಪ್ತ ಸಹಾಯಕರಾಗಿ ಮುಂದುವರೆದಿದ್ದರು, ಹಲವು ಜಿಲ್ಲಾಧಿಕಾರಿಗಳು ಬದಲಾವಣೆಯಾಗಿದ್ದರೂ ಆಪ್ತ ಸಹಾಯಕ ಮಾತ್ರ ಬದಲಾವಣೆಯಾಗಿರಲ್ಲ ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿ,ತಾಲ್ಲೂಕು ಕಚೇರಿಯಲ್ಲಿ ಸಾಕಷ್ಟು ಅಪಸ್ವರಗಳು ಕೇಳಿಬಂದಿದ್ದವು .

 

 

 

 

 

ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ ಹೆಚ್ ಜಿ ರಮೇಶ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿದ್ದ ಹೇರಂಭ ಹಾಗೂ ಇತರೆ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು,

 

 

 

 

ಅಂತಿಮವಾಗಿ ಜಿಲ್ಲಾಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಹೇರಂಭ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಗುಬ್ಬಿ ತಾಲ್ಲೂಕು ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version