ಪೆಟ್ರೋಲ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರು ಗಟ್ಟಿ ಇಬ್ಬರು ಕಾರ್ಮಿಕರ ಸಾವು.

ಪೆಟ್ರೋಲ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರು ಗಟ್ಟಿ ಇಬ್ಬರು ಕಾರ್ಮಿಕರ ಸಾವು.

 

ತಿಪಟೂರು ತಾಲೂಕಿನ ಬಂಡಿಹಳ್ಳಿ ಬಳಿ ಇರುವ ರಾಹುಲ್ ಪೆಟ್ರೋಲ್ ಬಂಕ್ ನಲ್ಲಿ ಇಂದು ಸಂಜೆ ಘಟನೆ ನಡೆದಿದ್ದು ಬಂಕ್ನಲ್ಲಿದ್ದ ಪೆಟ್ರೋಲ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಆಮ್ಲಜನಕದ ಕೊರತೆ ಉಂಟಾಗಿ ಇಬ್ಬರು ಕಾರ್ಮಿಕರು ಭೂಮಿಯೊಳಗಿದ್ದ ಟ್ಯಾಂಕ್ ನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

 

 

ಸಾವನ್ನಪ್ಪಿರುವ ಕಾರ್ಮಿಕರನ್ನು ತಮಿಳುನಾಡು ಮೂಲದ ರವಿ ಹಾಗೂ ಅರಸೀಕೆರೆ ಮೂಲದ ನಾಗರಾಜು ಎಂದು ಗುರುತಿಸಲಾಗಿದೆ.

 

ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿ ಬ್ಯಾಂಕ್ ನಲ್ಲಿ ಸಿಲುಕಿದ್ದ ಮೃತ ದೇಹಗಳನ್ನ ಹೊರ ತೆಗೆದು ತಾಲೂಕು ಆಸ್ಪತ್ರೆಗೆ ಮೃತ ದೇಹಗಳನ್ನ ಸಾಗಿಸಿದ್ದಾರೆ.

 

 

 

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version