ಕಾರು ಹಾಗೂ ಲಾರಿ ನಡುವೆ ಅಪಘಾತ ಇಬ್ಬರ ಸಾವು.

ಕಾರು ಹಾಗೂ ಲಾರಿ ನಡುವೆ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು.

 

ತುಮಕೂರು_ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಹೊರವಲಯದ ಮರಳೂರು ಕೆರೆ ಏರಿ ಬಳಿ ನಡೆದಿದೆ.

 

 

 

 

ಮಂಗಳವಾರ ಸಂಜೆ ನಡೆದ ಅಪಘಾತದಲ್ಲಿ ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಅರುಣ್ ಮತ್ತು ಚೇತನ್ ಮೃತಪಟ್ಟ ವ್ಯಕ್ತಿಗಳಾಗಿದ್ದು ಇನ್ನೂ ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಲಾರಿ ಕೆಳಗೆ ನುಗ್ಗಿದೆ.

 

 

ಇನ್ನು ಅಪಘಾತ ನಡೆದ ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಇನ್ನು ಅಪಘಾತ ಸಂಭವಿಸಿದ ಕೆರೆ ಏರಿಯ ಮೇಲೆ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಡುವ ಸ್ಥಿತಿ ನಿರ್ಮಾಣವಾಯಿತು.ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

 

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!