ಬೆಂಗಳೂರು; ಬೈಕ್ ಸವಾರರಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

ಬೆಂಗಳೂರು; ಬೈಕ್ ಸವಾರರಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

ಬೆಂಗಳೂರು : ಬುರ್ಖಾ ಧರಿಸಿದ್ದ ಮಹಿಳೆಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಸುದ್ದಗಂಟೆಪಾಳ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.

 

ನಗರದ ಡೈರಿ ಸರ್ಕಲ್ ಬಳಿ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ವೀಡಿಯೊ ವೈರಲ್ ಆಗಿದೆ. ಬೈಕ್ ತಡೆದ ಯುವಕರು ಮಹಿಳೆ ಹಾಗು ಬೈಕ್ ಸವಾರನಿಗೆ ಹಲ್ಲೆ ನಡೆಸಿರುವುದಾಗಿ ದೂರು ದಾಖಲಾಗಿದೆ.

 

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಘಟನೆಯ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ”ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ನಮ್ಮ ಸರಕಾರ ಇಂತಹ ಘಟನೆಗಳ ವಿರುದ್ಧ ಕಠಿಣ ನಿಲುವು ತಾಳುತ್ತದೆ. ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

You cannot copy content of this page

error: Content is protected !!