ಶಾಸಕರು ಶುದ್ಧ ಕುಡಿಯುವ ನೀರಿನ ಘಟಕವನ್ನು 14 ನೇ ವಾರ್ಡಿನಲ್ಲಿ ಉದ್ಘಾಟಿಸಿದರು
ದೇವನಹಳ್ಳಿ: ಸುಮಾರು ೫ ಲಕ್ಷ ರೂ. ವೆಚ್ಚದಲ್ಲಿ ದೇವನಹಳ್ಳಿ ಪಟ್ಟಣದ ಪುರಸಭಾ ವ್ಯಾಪ್ತಿಯ ೧೪ನೇ ವಾರ್ಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಲ್.ಎನ್.ನಾರಾಯಣಸ್ವಾಮಿ ಉದ್ಘಾಟಿಸಿದರು.
ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ಈ ಭಾಗದ ಜನರು ಶುದ್ಧ ಕುಡಿಯುವ ನೀರನ್ನು ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಕೆರೆಗಳಲ್ಲಿ ನೀರು ತುಂಬಿರುವುದರಿಂದ ತಾಲೂಕಿನ ಜನರಿಗೆ ಈ ಬಾರಿ ಬೇಸಿಗೆಯಲ್ಲಿ ನೀರಿನ ಅಭಾವ ತಲೆದೂರುವುದಿಲ್ಲ. ಹಲವಾರು ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಯುವ ಮುಖಂಡ ವೈ.ಆರ್.ರುದ್ರೇಶ್ ನೇತೃವದಲ್ಲಿ ವಾರ್ಡಿನ ಜನರಿಗೆ ಉಚಿತ ನೀರಿನ ಕ್ಯಾನ್ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ. ಎಲ್ಲಾ ಪಕ್ಷದ ಮುಖಂಡರು ಪಕ್ಷಾತೀತವಾಗಿ ಇಂತಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ವಿಷಯ ಎಂದು ಹೇಳಿದರು.
ಪುರಸಭಾ ಅಧ್ಯಕ್ಷೆ ರೇಖಾ ವೇಣುಗೋಪಾಲ್ ಮಾತನಾಡಿ, ೧೪ನೇ ವಾರ್ಡಿನಲ್ಲಿ ನೀರಿನ ಘಟವನ್ನು ಉದ್ಘಾಟಿಸಲಾಗಿದೆ. ವಾರ್ಡಿನ ಜನರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ಈ ವೇಳೆಯಲ್ಲಿ ಪುರಸಭಾ ಸದಸ್ಯ ವೈ.ಆರ್.ರುದ್ರೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಪುರಸಭಾ ಸದಸ್ಯ ರಘು, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ನಾಗೇಶ್, ಟೌನ್ ಅಧ್ಯಕ್ಷ ಮುನಿಆಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್ ಬಾಬು, ಯುವ ಮುಖಂಡರಾದ ಭರತ್ಕುಮಾರ್, ಲಕ್ಷ್ಮೀನಾರಾಯಣ್(ಲಚ್ಚಿ), ಪುರಸಭಾ ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ರತ್ನಮ್ಮ, ಲೀಲಾಶಿವಕುಮಾರ್, ಗೀತಾಶ್ರೀಧರ್, ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ವಾರ್ಡಿನ ಮುಖಂಡರು, ಜನರು ಇದ್ದರು.
ಮಂಜು ಬೂದಿದೆಗೆರೆ
9113813926